ವಿರಾಜಪೇಟೆ: ಸಮೀಪದ ಬಿಟ್ಟಂಗಾಲ ಬಳಿ ನಡೆದ ಬೈಕ್ ಅಪಘಾತದಲ್ಲಿ ಗ್ರಾಮ ಲೆಕ್ಕಿಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೂಲತಃ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕಡಬಗೇರಿ ಗ್ರಾಮದ ನಿವಾಸಿ ಪ್ರವೀಣ್ ದೊಡ್ಡಜ್ಜ (24 ವರ್ಷ)ಮೃತಪಟ್ಟವರು.
ಈತ ಪೊನ್ನಂಪೇಟೆಯಿಂದ ಭಾನುವಾರ ರಾತ್ರಿ ಪಟ್ಟಣಕ್ಕೆ ಬೈಕ್ನಲ್ಲಿ ವಾಪಸಾಗುತ್ತಿದ್ದಾಗ ಬಿಟ್ಟಂಗಾಲ ಜಂಕ್ಷನ್ ಬಳಿ ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ತಲೆಗೆ ತೀವ್ರಪೆಟ್ಟುಬಿದ್ದು ಪ್ರವೀಣ್ ಮೃತಪಟ್ಟಿದ್ದಾರೆ. ಈತ ಸಮೀಪದ ಅಮ್ಮತ್ತಿ ಹೋಬಳಿ ಬಿಳುಗುಂದದ ಗ್ರಾಮಲೆಕ್ಕಿಗರಾಗಿ ಕರ್ತವ್ಯನಿರ್ವಹಿಸುತ್ತಿದ್ದರು.
ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.