ADVERTISEMENT

ಮೊಟ್ಟೆ ಎಸೆತ ಪ್ರಕರಣ: ಕೊಡಗಿನಲ್ಲಿ ಎಸ್ಪಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 7:49 IST
Last Updated 19 ಆಗಸ್ಟ್ 2022, 7:49 IST
ಕಾಂಗ್ರೆಸ್ ಕಾರ್ಯಕರ್ತರು ಕೊಡಗು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಕಾರ್ಯಕರ್ತರು ಕೊಡಗು ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.   

ಮಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪೊಲೀಸರ ವಿರುದ್ಧ ಘೋಷಣೆ ಕೂಗಿದ ಅವರು ವಿಜಯ ವಿನಾಯಕ ದೇಗುಲದಿಂದ ಮೆರವಣಿಗೆ ಹೊರಟರು.

ಪೊಲೀಸರು ಬಿಜೆಪಿ ಕೈಗೊಂಬೆಗಳಾಗಿದ್ದಾರೆ ಎಂದು ಆರೋಪಿಸಿದ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬದಲಾವಣೆ ಆಗಬೇಕು ಎಂದು ಆಗ್ರಹಿಸಿದರು. ಆಗಸ್ಟ್26 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಅಂದು ಬಂದು ಬಿಜೆಪಿ ಕಾರ್ಯಕರ್ತರು ಮುಖಂಡರು ನೋಡಲಿ ಎಂದೂ ಸವಾಲೆಸೆದರು.

ಬಿಜೆಪಿ ಶಾಸಕರು ಮೊಟ್ಟೆ ಎಸೆದವರಿಗೆ ಬೆಂಬಲ ನೀಡುತ್ತಿದ್ದಾರೆ. ಭಾವನಾತ್ಮಕ ವಿಚಾರಗಳ ಮೂಲಕ ಆಯ್ಕೆಯಾಗಿದ್ದೀರಿ. ಅಭಿವೃದ್ದಿಯಲ್ಲಿ ವಿಫಲರಾಗಿದ್ದೀರಿ ಈ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸಲು ಸಿದ್ದರಾಮಯ್ಯ ಅವರ ಶಕ್ತಿ ಕುಂದಿಸಲು ಮೊಟ್ಟೆ ಎಸೆಯಲಾಯಿತು ಎಂದು ದೂರಿದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.