ADVERTISEMENT

ಮಡಿಕೇರಿ: ಮುಹೂರ್ತ ಮುಗಿಸಿ ಸ್ಪರ್ಧಾತ್ಮಕ ಪರೀಕ್ಷೆ ಬರೆದ ವಧು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 13:14 IST
Last Updated 22 ನವೆಂಬರ್ 2020, 13:14 IST
ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ಪರೀಕ್ಷೆ ಬರೆದ ಸ್ವಾತಿ
ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ಪರೀಕ್ಷೆ ಬರೆದ ಸ್ವಾತಿ   

ಮಡಿಕೇರಿ: ಮುಹೂರ್ತ ಮುಗಿಸಿದ ವಧುವೊಬ್ಬರು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಯ ಜ್ಯೂನಿಯರ್ ಕಾಲೇಜಿಗೆ ಭಾನುವಾರ ಬಂದು ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದಾರೆ.

ಅಶೋಕಪುರ ನಿವಾಸಿ ಸ್ವಾತಿ ಅವರೇ ಪರೀಕ್ಷೆ ಬರೆದ ವಧು. ವಿವಾಹ ದಿನಾಂಕಕ್ಕೂ ಮೊದಲೇ ಡಿಸಿಸಿ ಬ್ಯಾಂಕ್‌ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿದ್ದ ಸ್ವಾತಿ ಅವರಿಗೆ ಸುಂಟಿಕೊಪ್ಪದ ಮಧುರಮ್ಮ ಪಟ್ಟಣದ ಸುರೇಶ್ ಅವರೊಂದಿಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಮದುವೆ ನಿಶ್ಚಯವಾಗಿತ್ತು. ಪರೀಕ್ಷಾ ದಿನದಂದೇ ಮುಹೂರ್ತ ನಿಗದಿಯಾಗಿತ್ತು. ಪರೀಕ್ಷೆಗೆ ಅಡ್ಡಿಯಾಗದಂತೆ ಮುಹೂರ್ತದ ಸಮಯ ನಿಗದಿ ಪಡಿಸಲಾಗಿತ್ತು. ಭಾನುವಾರ ಬೆಳಿಗ್ಗೆ 6.30 ಗಂಟೆಯಿಂದ 9 ಗಂಟೆವರೆಗೆ ಶುಭಲಗ್ನದಲ್ಲಿ ಮುಹೂರ್ತದಲ್ಲಿ ಪಾಲ್ಗೊಂಡು ಬಳಿಕ ಸ್ವಾತಿ ಪರೀಕ್ಷೆಗೆ ಬಂದಿದ್ದರು.

ಮುಹೂರ್ತ ಉಡುಗೆಯಲ್ಲೇ ಪರಿಕ್ಷಾ ಕೇಂದ್ರಕ್ಕೆ ಹಾಜರಾಗಿದ್ದರು.

ADVERTISEMENT

ಪರೀಕ್ಷೆಗೆ ಕೆಲವು ತಿಂಗಳಿಂದ ತಯಾರಿ ನಡೆಸಿದ್ದೆ. ಪರೀಕ್ಷೆ ಬರೆಯುವ ಉದ್ದೇಶದಿಂದಲೇ ಮದುವೆ ಶಾಸ್ತ್ರಗಳನ್ನು ಸ್ವಲ್ಪ ಆತುರವಾಗಿಯೇ ಮುಗಿಸಿದ್ದೇವೆ. ಪರೀಕ್ಷೆಯಲ್ಲಿ ಉತ್ತೀರ್ಣನಾಗುತ್ತೇನೆ ಎನ್ನುವ ವಿಶ್ವಾಸವಿದೆ ಎಂದು ನವವಧು ಸ್ವಾತಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.