ನಾಪೋಕ್ಲು: ಸ್ಥಳೀಯ ಲಯನ್ಸ್ ಕ್ಲಬ್ ವತಿಯಿಂದ ಪೌರ ಕಾರ್ಮಿಕರಿಗೆ ಗಂಬೂಟು ಮತ್ತು ಕೈಗ್ಲೌಸ್ ವಿತರಿಸಿ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ನ ಅಧ್ಯಕ್ಷ ಎಂ.ಬಿ ಕುಟಪ್ಪ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ ಅಂಗವಾಗಿ ಇಲ್ಲಿಯ ಮಹಿಳಾ ಸಮಾಜದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಟ್ಟಣದ ಪೌರ ಕಾರ್ಮಿಕರಾದ ವಿಶ್ವ, ಸೋಮಣ್ಣ, ರವಿ ಅವರನ್ನು ಗೌರವಿಸಲಾಯಿತು.
ಲಯನ್ಸ್ ಪ್ರಾಂತೀಯ ಅಧ್ಯಕ್ಷ ಡಾ.ಪಂಚಮ್ ತಿಮ್ಮಯ್ಯ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಬನ್ಸಿಭೀಮಯ್ಯ, ಖಜಾಂಚಿ ವಸಂತ ಮುತ್ತಪ್ಪ, ಸುಧಿ ತಿಮ್ಮಯ್ಯ , ರೇಷ್ಮಾ ಉತ್ತಪ್ಪ, ರಘು ತಿಮ್ಮಯ್ಯ , ಮೇರಿ ಚೆಟ್ಟಿಯಪ್ಪ, ಶುಭಾಷ್ ತಿಮ್ಮಯ್ಯ , ರೇಖಾ ಪೊನ್ನಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.