ADVERTISEMENT

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 15:30 IST
Last Updated 28 ಸೆಪ್ಟೆಂಬರ್ 2022, 15:30 IST

ಸಿದ್ದಾಪುರ (ಕೊಡಗು ಜಿಲ್ಲೆ): ಬಿಜೆಪಿ ಕಾರ್ಯಕರ್ತರಾದ ಮೂವರು ಸೋದರರು ಹಾಗೂ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಇಲ್ಲಿನ ಅರೆಕಾಡು ಸಮೀಪದ ಚಹಾ ಅಂಗಡಿಯೊಂದರಲ್ಲಿ ಘರ್ಷಣೆ ಸಂಭವಿಸಿದ್ದು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಯಶ್ವಂತ್ ಹಾಗೂ ಕೋಶಾಧಿಕಾರಿ ಚಂದನ್ ಅಪ್ಪಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ.

‘ಯಶ್ವಂತ್ ಹಾಗೂ ಚಂದನ್ ಅಪ್ಪಯ್ಯ ಚಹಾ ಕುಡಿಯುತ್ತಿದ್ದಾಗ ಸ್ಥಳೀಯ ಬಿಜೆಪಿ ಮುಖಂಡರಾದ ಅರೆಕಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭುಶೇಖರ್ ಹಾಗೂ ಅವರ ಸೋದರರಾದ ಅಪ್ರು ರವೀಂದ್ರ, ಆನಂದ್ ರಘು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದರು ಎಂದು ದೂರಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನೂ ಸಿದ್ದಾಪುರ ಸಮುದಾಯ ಆರೋಗ್ಯ ಕೆಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಕೂಡಾ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಆರೋಪಿಗಳ ವಿರುದ್ಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.