ADVERTISEMENT

ಗೋಣಿಕೊಪ್ಪಲು: ಬಾಳೆಲೆಯಲ್ಲಿ ಕಾಂಕ್ರಿಟ್ ರಸ್ತೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 1:53 IST
Last Updated 9 ಜೂನ್ 2025, 1:53 IST
ಗೋಣಿಕೊಪ್ಪಲು ಬಳಿಯ ಬಾಳೆಲೆ ಗಂಧದಗುಡಿ ಪೈಸಾರಿಯ ನೂತನ ಕಾಂಕ್ರಿಟ್ ರಸ್ತೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ತೀತರ ಧರ್ಮಜ ಉತ್ತಪ್ಪ, ಸಿ.ಎಸ್.ಅರುಣ್ ಮಾಚಯ್ಯ, ಮೀದೀರಿರ ನವೀನ್ ಪಾಲ್ಗೊಂಡಿದ್ದರು
ಗೋಣಿಕೊಪ್ಪಲು ಬಳಿಯ ಬಾಳೆಲೆ ಗಂಧದಗುಡಿ ಪೈಸಾರಿಯ ನೂತನ ಕಾಂಕ್ರಿಟ್ ರಸ್ತೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ತೀತರ ಧರ್ಮಜ ಉತ್ತಪ್ಪ, ಸಿ.ಎಸ್.ಅರುಣ್ ಮಾಚಯ್ಯ, ಮೀದೀರಿರ ನವೀನ್ ಪಾಲ್ಗೊಂಡಿದ್ದರು   

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗಂಧದಗುಡಿ ಪೈಸಾರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಕಾಂಕ್ರಿಟ್ ರಸ್ತೆ ಯನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ನಿವಾಸಿಗಳ ಮನವಿ ಮೇರೆಗೆ ₹30 ಲಕ್ಷ ಅನುದಾನದಲ್ಲಿ ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಹೇಳಿದರು.


ಜಿಲ್ಲಾ ಗ್ಯಾರೆಂಟಿ ಸಮಿತಿ ಅಧ್ಯಕ್ಷ ತೀತರ ಧರ್ಮಜ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೀರಿರ ನವೀನ್, ಬಾಳೆಲೆ ವಲಯ ಕಾಂಗ್ರೆಸ್ ಅಧ್ಯಕ್ಷ ಕೋದೇಂಗಡ ಸೋಮಣ್ಣ, ನಿಟ್ಟೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪಾರುವಂಗಡ ಪವನ್, ಬಾಳೆಲೆ ಗ್ರಾಮ ಪಂಚಾಯಿತಿ ಸದಸ್ಯ ಆದೇಂಗಡ ವಿನು ಉತ್ತಪ್ಪ, ಗಣೇಶ್ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.