ADVERTISEMENT

ಕೊಡಗಿನಲ್ಲಿ ಕಾಂಗ್ರೆಸ್ ಬಲ ಹೆಚ್ಚಿಸಿ

ಗಡಿಗ್ರಾಮ ಕರಿಕೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 14:36 IST
Last Updated 27 ಜನವರಿ 2021, 14:36 IST
ಕರಿಕೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಯಿತು
ಕರಿಕೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಯಿತು   

ಮಡಿಕೇರಿ: ಕೇಂದ್ರ–ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳಿಂದ ಬೇಸತ್ತಿರುವ ಜನರು, ಕಾಂಗ್ರೆಸ್ ಆಡಳಿತ ಮತ್ತೆ ಅಸ್ತಿತ್ವಕ್ಕೆ ಬರಬೇಕೆನ್ನುವ ನಿರೀಕ್ಷೆಯಲ್ಲಿದ್ದು, ಪಕ್ಷ ಸಂಘಟನೆ ಮತ್ತಷ್ಟು ಚುರುಕುಗೊಳ್ಳಬೇಕಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.

ಗ್ರಾ.ಪಂ. ಚುನಾವಣೆಯಲ್ಲಿ ಕರಿಕೆ ಪಂಚಾಯಿತಿಗೆ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದರಿಂದ ಕರಿಕೆಯಲ್ಲಿ ನಡೆದ ವಿಜಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಕರಿಕೆ ಗ್ರಾಮದ ಕಾರ್ಯಕರ್ತರ ಉತ್ಸಾಹ ಇತರರಿಗೂ ಮಾದರಿಯಾಗಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಿಸಲು ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಮಾತನಾಡಿ ಪಕ್ಷ ಸಂಘಟನೆ ಕುರಿತು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಕೆಪಿಸಿಸಿ ವಕ್ತಾರ ಎ.ಎಸ್.ಪೊನ್ನಣ್ಣ ಮಾತನಾಡಿ, ಜನಪರ ಕಾಳಜಿಯೊಂದಿಗೆ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು. ಪಕ್ಷ ಬಲವರ್ಧನೆಯ ಸಂದರ್ಭ ಕಾನೂನಾತ್ಮಕ ಸಹಕಾರ ನೀಡುವುದಾಗಿ ಹೇಳಿದರು.

ಹಿರಿಯ ಮುಖಂಡ ಎಚ್.ಎಸ್.ಚಂದ್ರಮೌಳಿ, ಕೆಪಿಸಿಸಿ ಫ್ಯಾನಲಿಸ್ಟ್ ಟಿ.ಪಿ.ರಮೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಟಿ.ಎಂ.ಶಾಹಿದ್, ಕರಿಕೆ ಕಾಂಗ್ರೆಸ್ ಪ್ರಮುಖ ಎನ್.ಬಾಲಚಂದ್ರ ನಾಯರ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.