ADVERTISEMENT

ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತ; ನೂರಾರು ವಿದ್ಯಾರ್ಥಿಗಳು ಭಾಗಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 6:02 IST
Last Updated 21 ಫೆಬ್ರುವರಿ 2024, 6:02 IST
   

ಮಡಿಕೇರಿ: ಸಂವಿಧಾನ ಜಾಗೃತಿ ಜಾಥಾಕ್ಕೆ ಮಡಿಕೇರಿಯಲ್ಲಿ ಶಾಲಾಮಕ್ಕಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸ್ವಾಗತ ಕೋರಿದರು.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಇಲ್ಲಿ ರಾಜಾಸೀಟ್ ಉದ್ಯಾನದ ಮುಂಭಾಗದಿಂದ ಬುಧವಾರ ಆರಂಭವಾದ ಮೆರವಣಿಗೆ ಕಾವೇರಿ ಕಲಾಕ್ಷೇತ್ರದವರೆಗೂ ನಡೆಯಿತು.

ಮಹಿಳೆಯರು ತುಂಬು ಕಳಸವಿಡಿದು ಹಾಗೂ ಮಕ್ಕಳು ಬ್ಯಾಂಡ್ ವಾದನದ ಮೂಲಕ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.