ADVERTISEMENT

ಕುಶಾಲನಗರ: ಅತ್ತೂರಿನ 26 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 19:31 IST
Last Updated 24 ಡಿಸೆಂಬರ್ 2021, 19:31 IST
ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ
ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ   

ಕುಶಾಲನಗರ: ಸಮೀಪದ ಅತ್ತೂರು ಜ್ಞಾನಗಂಗಾ ಶಾಲೆಯ 26 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ವಸತಿ ಶಾಲೆಯಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಮಂಗಳವಾರ ಸೋಂಕು ದೃಢಪಟ್ಟಿತ್ತು. ನಂತರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ನೇತೃತ್ವದಲ್ಲಿ ಬುಧವಾರ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಒಳಪಡಿಸಲಾಗಿದ್ದು, ಮತ್ತೆ 24 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.

‘ಎಲ್ಲರಿಗೂ ಸೋಮವಾರಪೇಟೆ ಆಸ್ಪತ್ರೆಯಲ್ಲಿ ಶನಿವಾರ ಚಿಕಿತ್ಸೆ ನೀಡಿ ಹೋಂ ಕ್ವಾರಂಟೈನ್‌‌ಗೆ ಒಳಪಡಿಸಲಾಗುವುದು’ ಎಂದು ಆರೋಗ್ಯಾಧಿಕಾರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.