ADVERTISEMENT

ಹುಲಿ ದಾಳಿಗೆ ಮತ್ತೊಂದು ಹಸು ಸಾವು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 13:52 IST
Last Updated 14 ಸೆಪ್ಟೆಂಬರ್ 2022, 13:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸಿದ್ದಾಪುರ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಘಟ್ಟದಳ ಗ್ರಾಮದಲ್ಲಿ ಹುಲಿ ದಾಳಿಗೆ ಬುಧವಾರ ಮತ್ತೊಂದು ಹಸು ಮೃತಪಟ್ಟಿದೆ. ಕಳೆದ ಕೆಲ ದಿನಗಳಿಂದ ಹುಲಿ ದಾಳಿಗೆ ಸಿಲುಕಿ ಮೃತಪಟ್ಟ ಜಾನುವಾರುಗಳ ಸಂಖ್ಯೆ 3ಕ್ಕೇ ಏರಿದೆ.

ಘಟ್ಟದಳ ನಿವಾಸಿ ಜಯಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಮೇಯಲು ಬಿಡಲಾಗಿತ್ತು. ಬುಧವಾರ ಮದ್ಯಾಹ್ನದ ಬಳಿಕ ಹುಲಿ ದಾಳಿ ನಡೆಸಿ ಕೊಂದಿದೆ. ಒಂದು ದಿನದ ಹಿಂದೆಯಷ್ಟೆ ಜಯಚಂದ್ರ ಅವರ ಹಾಲು ಕರೆಯುವ ಹಸು ಹುಲಿ ದಾಳಿಗೆ ಬಲಿಯಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹುಲಿಗಾಗಿ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲೇ ಹುಲಿ ಹಸುವಿನ ಮೇಲೆ ದಾಳಿ ನಡೆಸಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT