ADVERTISEMENT

ಹಿಂದೂ ಸಂಘಟನೆಗಳಿಂದ ಜಾಗೃತಿ ಜಾಥಾ ಸಾಧ್ಯತೆ: ಕೊಡಗಿನಲ್ಲಿ ನಾಳೆ ನಿಷೇಧಾಜ್ಞೆ

ಕೊಡಗಿನಲ್ಲಿ ನಾಳೆ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರ ತನಕ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 13:07 IST
Last Updated 9 ನವೆಂಬರ್ 2021, 13:07 IST
ಚಿತ್ರ: ಮಡಿಕೇರಿಯಲ್ಲಿ 2015ರಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ಕುಟ್ಟಪ್ಪ ಸ್ಮರಣಾರ್ಥವಾಗಿ ವಿಶ್ವ ಹಿಂದೂ ಪರಿಷತ್‌ ಜಾಗೃತಿ ಜಾಥಾ ನಡೆಸುವ ಸಾಧ್ಯತೆಯಿದ್ದು, ಪೊಲೀಸರು ಮಂಗಳವಾರ ಸಂಜೆ ಪಥಸಂಚನ ನಡೆಸಿದರು
ಚಿತ್ರ: ಮಡಿಕೇರಿಯಲ್ಲಿ 2015ರಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ಕುಟ್ಟಪ್ಪ ಸ್ಮರಣಾರ್ಥವಾಗಿ ವಿಶ್ವ ಹಿಂದೂ ಪರಿಷತ್‌ ಜಾಗೃತಿ ಜಾಥಾ ನಡೆಸುವ ಸಾಧ್ಯತೆಯಿದ್ದು, ಪೊಲೀಸರು ಮಂಗಳವಾರ ಸಂಜೆ ಪಥಸಂಚನ ನಡೆಸಿದರು   

ಮಡಿಕೇರಿ: ನಗರದಲ್ಲಿ 2015ರಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ಕುಟ್ಟಪ್ಪ ಅವರ ಸ್ಮರಣಾರ್ಥವಾಗಿ ವಿಶ್ವ ಹಿಂದೂ ಪರಿಷತ್‌ ಸೇರಿ ವಿವಿಧ ಸಂಘಟನೆಗಳು ಜಾಗೃತಿ ಜಾಥಾ ನಡೆಸುವ ಸಾಧ್ಯತೆಯಿದ್ದು, ಭದ್ರತೆ ಕೈಗೊಳ್ಳಲಾಗಿದೆ. ಈ ನಡುವೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ.

ಜಿಲ್ಲಾ ಪೊಲೀಸ್‌ ಹಾಗೂ ಅರೆಸೇನಾ ಪಡೆಯ ಸಿಬ್ಬಂದಿ ಮಂಗಳವಾರ ಸಂಜೆ ನಗರದಾದ್ಯಂತ ಪಥಸಂಚಲನ ನಡೆಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಭದ್ರತೆಗೆ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಸೂಕ್ಷ್ಮಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನ.10ರ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹ ಪ್ರವೇಶ ಹೊರತುಪಡಿಸಿ ಉಳಿದಂತೆ ಸಭೆ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ. ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಜಾಥಾ, ಮುತ್ತಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.