ಸೋಮವಾರಪೇಟೆ: ತಾಲ್ಲೂಕಿನಾದ್ಯಂತ ಎರಡು ದಿನಗಳಿಂದ ಗಾಳಿ, ಮಳೆ ಕಡಿಮೆಯಾದರೂ, ಅಲ್ಲಲ್ಲಿ ಹಾನಿ ಸಂಭವಿಸುತ್ತಿದೆ.
5 ದಿವಸ ಭಾರಿ ಗಾಳಿಯೊಂದಿಗೆ ಮಳೆ ಸುರಿದಿದ್ದ ಸಂದರ್ಭ ಸಾಕಷ್ಟು ಮರಗಳು ಉರುಳಿದರೆ, ಹಲವು ಮನೆಗಳಿಗೆ ಹಾನಿಯಾಗಿದೆ. ಬುಧವಾರ ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಳ್ಳೆ ಕರ್ಕಳ್ಳಿ ಗ್ರಾಮದ ವೀಣಾ ಅವರ ವಾಸದ ಮನೆ ಹಾಗೂ ನಿಡ್ತ ಗ್ರಾಮ ಪಂಚಾಯಿತಿ ಅಂಗನವಾಡಿ ಕೇಂದ್ರದ ಬಳಿ ಬೃಹತ್ ಮರವೊಂದು ಉರುಳಿ ಹಾನಿಯಾಗಿದೆ. ಮರ ರಸ್ತೆಗೆ ಬಿದ್ದಿದ್ದರಿಂದ ಅಂಗನವಾಡಿ ಕೇಂದ್ರದ ಎದುರಿನ ವಿದ್ಯುತ್ ಕಂಬ ಉರುಳಿದೆ.
ಅರಣ್ಯ ಇಲಾಖೆಯವರು ಮರವನ್ನು ತೆರವುಗೊಳಿಸಿದರು. ಸೆಸ್ಕ್ ಸಿಬ್ಬಂದಿ ವಿದ್ಯುತ್ ಮಾರ್ಗ ದುರಸ್ತಿ ಮಾಡಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.