ADVERTISEMENT

ಜಾರಿ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2018, 12:49 IST
Last Updated 20 ಅಕ್ಟೋಬರ್ 2018, 12:49 IST

ಮಡಿಕೇರಿ: ಮೇಯಲು ಬಿಟ್ಟಿದ್ದ ದನಗಳನ್ನು ಮನೆಗೆ ಹೊಡೆದುಕೊಂಡು ಬರಲು ತೆರಳಿದ್ದ ವ್ಯಕ್ತಿಯೊಬ್ಬರು ಬೆಟ್ಟದಿಂದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ಬೆಟ್ಟಗೇರಿಯ ಗ್ರಾಮದ ಕಡ್ಲೇರ ಮೋಹನ್‌ (47) ಮೃತಪಟ್ಟವರು. ಶುಕ್ರವಾರ ಸಂಜೆ ಭಾರಿ ಮಳೆ ಸುರಿಯುತ್ತಿತ್ತು. ಆಗ ಬೆಟ್ಟದಿಂದ ಜಾರಿ ಬಿದ್ದು ಮೇಲಕ್ಕೆ ಬರಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT