ADVERTISEMENT

ಕುಶಾಲನಗರ : ಕಾವೇರಿಯಲ್ಲಿ ಮುಳುಗಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 8 ಜೂನ್ 2019, 13:49 IST
Last Updated 8 ಜೂನ್ 2019, 13:49 IST

ಕುಶಾಲನಗರ: ಇಲ್ಲಿನ ಎಪಿಎಂಸಿಯ ಕಾವೇರಿ ನದಿಯಲ್ಲಿ ಶನಿವಾರ ಬೆಳಿಗ್ಗೆ ಕಾಲು ಜಾರಿ ನದಿಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಇಬ್ಬರು ಮೃತ‍ಪಟ್ಟಿದ್ದಾರೆ.

ಇಲ್ಲಿನ ಬದ್ರುನ್ನೀಸಾ ಲೇಔಟ್ ನಿವಾಸಿ ನಾಸಿರ್ ಖಾನ್ (44) ಮತ್ತು ಸೈಯದ್ ಅಕ್ಮಲ್ ಪುತ್ರ ಸೈಯದ್ ಮೋಹಿನ್ (14) ಮೃತರು.

ರಂಜಾನ್ ಹಬ್ಬಕ್ಕೆಂದು ನಾಸಿರ್ ಖಾನ್ ಅವರ ನಿವಾಸಕ್ಕೆ ಸಂಬಂಧಿಕರು ಆಗಮಿಸಿದ್ದರು. ಶನಿವಾರ ಬೆಳಗ್ಗೆ ಬಟ್ಟೆ ತೊಳೆಯಲೆಂದು ನಾಸಿರ್ ಖಾನ್ ಕುಟುಂಬದವರೊಂದಿಗೆ ನದಿಗೆ ತೆರಳಿದ್ದಾರೆ. ಈ ವೇಳೆ ಸೈಯದ್ ಮೋಹಿನ್ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾನೆ. ಈತನನ್ನು ರಕ್ಷಿಸಲು ಮುಂದಾದ ನಾಸಿರ್ ಖಾನ್ ಕೂಡ ನೀರಿಗಿಳಿದಿದ್ದಾರೆ. ಆದರೆ ಇಬ್ಬರೂ ಕೂಡ ನೀರಿನಲ್ಲಿ ಮುಳುಗಿ ಸಾವನಪ್ಪಿರುವುದಾಗಿ ಮೃತ ನಾಸಿರ್ ಖಾನ್ ಪತ್ನಿ ಮೋಸಿನಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ADVERTISEMENT

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಮತ್ತು ಮುಳುಗುತಜ್ಞ ರಾಮಕೃಷ್ಣ ಅವರು ನದಿಯಲ್ಲಿ ಮುಳುಗಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.