ADVERTISEMENT

ಸಾಕಾನೆ ದಾಳಿಗೆ ದುಬಾರೆ ಹಾಡಿ ನಿವಾಸಿ ಸಾವು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 7:12 IST
Last Updated 29 ಸೆಪ್ಟೆಂಬರ್ 2022, 7:12 IST
   

ಕುಶಾಲನಗರ: (ಕೊಡಗು ಜಿಲ್ಲೆ): ಇಲ್ಲಿನ ದುಬಾರೆ ಹಾಡಿಯಲ್ಲಿ ಸಾಕಾನೆಯೊಂದರ ದಾಳಿಗೆ ಸಿಲುಕಿ ಹಾಡಿ ನಿವಾಸಿ ಬಸಪ್ಪ (28) ಮೃತಪಟ್ಟಿದ್ದಾರೆ.

ಅವರು ಗುರುವಾರ ಬೆಳಿಗ್ಗೆ ಮನೆಯಿಂದ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ಮಾಡಿದೆ. ಸ್ಥಳಕ್ಕೆ ತೆರಳಿದ ಮಾವುತನ ಮೇಲೂ ಆನೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಬಸಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ‌ ಸ್ಪಂದಿಸದೆ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT