ADVERTISEMENT

ಕುಶಾಲನಗರ | ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಗಜಪಯಣ: ಆನೆಗಳ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 4:30 IST
Last Updated 4 ಆಗಸ್ಟ್ 2025, 4:30 IST
ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರದಿಂದ ನಾಲ್ಕು ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಬೀಳ್ಕೊಟ್ಟರು
ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರದಿಂದ ನಾಲ್ಕು ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಬೀಳ್ಕೊಟ್ಟರು   

ಕುಶಾಲನಗರ: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ದುಬಾರೆ ಸಾಕಾನೆ ಶಿಬಿರದ ನಾಲ್ಕು ಸಾಕಾನೆಗಳಿಗೆ ಭಾನುವಾರ ಬೀಳ್ಕೊಡಲಾಯಿತು.

ದುಬಾರೆಯ ಸಾಕಾನೆಗಳಾದ ‘ಧನಂಜಯ’, ‘ಕಂಜನ್’, ‘ಪ್ರಶಾಂತ’ ಮತ್ತು ‘ಕಾವೇರಿ’ ಆನೆಗಳಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮಾವುತರು ಹಾಗೂ ಕಾವಾಡಿಗರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಬೀಳ್ಕೊಟ್ಟರು.

ದುಬಾರೆ ಆನೆ ಶಿಬಿರದಿಂದ ನಾಲ್ಕು ಆನೆಗಳನ್ನು ಹುಣಸೂರು ಬಳಿಯ ವೀರನಹೊಸಹಳ್ಳಿ ಶಿಬಿರಕ್ಕೆ ಲಾರಿಗಳ ಮೂಲಕ ಸಾಗಿಸಲಾಯಿತು.

ADVERTISEMENT

ಅರಣ್ಯ ಇಲಾಖೆ ಮಡಿಕೇರಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಕನ್ನಂಡ ರಂಜನ್, ಧರ್ಮೇಂದ್ರ ಮತ್ತು ಪಶು ವೈದ್ಯರಾದ ಡಾ. ಚಿಟ್ಟಿಯಪ್ಪ ಮತ್ತಿತರರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.