ಕುಶಾಲನಗರ: ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲೆಯ ನೇಸರ ಇಕೋ ಕ್ಲಬ್ ಸಹಯೋಗದೊಂದಿಗೆ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಆಂದೋಲನ ನಡೆಯಿತು.
ಪರಿಸರ ಅಧಿಕಾರಿ ರಘುರಾಮ್ ಮಾತನಾಡಿ, ‘ಸರ್ಕಾರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು
ಆಯಾ ಆಯಾ ಊರುಗಳಲ್ಲಿ ಸ್ಥಳೀಯ ಸಂಸ್ಥೆಗಳು ಗಣೇಶ ವಿಸರ್ಜನೆಗೆ ನಿಗದಿಪಡಿಸಿರುವ ಸ್ಥಳೀಯ ಹೊಂಡಗಳಲ್ಲಿ ಮಾತ್ರ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಬೇಕು ಎಂದು ನಾಗರಿಕರಲ್ಲಿ ಕೋರಿದ್ದಾರೆ.
ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಫಾತಿಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಎ.ಜಾನ್ಸನ್, ಶಾಲೆಯ ಶಿಕ್ಷಕಿ ಅನಿತಾ ಸುಪ್ರಿಯ ಮಾತನಾಡಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಯೋಜನಾ ಸಹಾಯಕ ಆಸ್ಟಿನ್, ಗೈಡ್ಸ್ ಶಿಕ್ಷಕಿ ಬಿ.ಎಂ. ಶಿಫಾನತ್, ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.