ಸೋಮವಾರಪೇಟೆ: ಸಮೀಪದ ಚೌಡ್ಲು ಆಲೇಕಟ್ಟೆಯಲ್ಲಿರುವ ಭಾರತೀಯ ಯುವಕ ಸಂಘದ ಮುಂದಿನ ಸಾಲಿನ ಅಧ್ಯಕ್ಷರಾಗಿ ಎ.ಆರ್. ಸತೀಶ್ ಆಯ್ಕೆಯಾದರು.
ಸಂಘದ ಅಧ್ಯಕ್ಷ ಸಿ.ಡಿ. ನೆಹರು ಅವರ ಅಧ್ಯಕ್ಷತೆಯಲ್ಲಿ, ಸಂಘದ ಸಭಾಂಗಣದಲ್ಲಿ ಈಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ನರೇಂದ್ರ, ಕಾರ್ಯದರ್ಶಿಯಾಗಿ ಬಿ.ಜಿ. ಕೃಷ್ಣಮೂರ್ತಿ, ಖಜಾಂಚಿಯಾಗಿ ರಾಜೇಂದ್ರ, ಸಹ ಕಾರ್ಯದರ್ಶಿಯಾಗಿ ಪದ್ಮನಾಭ್ ಸೇರಿದಂತೆ 11 ಮಂದಿಯನ್ನು ನಿರ್ದೇಶಕರುಗಳನ್ನಾಗಿ ನೇಮಿಸಲಾಯಿತು.
ಪ್ರಸಕ್ತ ಸಾಲಿನ ಗೌರಿ ಗಣೇಶೋತ್ಸವ ಉತ್ಸವ ಸಮಿತಿಯ ಅಧ್ಯಕ್ಷರನ್ನಾಗಿ ನಾಗೇಶ್ ಆಚಾರ್ ಅವರನ್ನು ಆಯ್ಕೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.