ADVERTISEMENT

ಕಾಡಾನೆ ದಾಳಿಗೆ ಕಾರ್ಮಿಕ ಬಲಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2019, 12:26 IST
Last Updated 21 ನವೆಂಬರ್ 2019, 12:26 IST

ಪೊನ್ನಂಪೇಟೆ (ಕೊಡಗು): ಕುಟ್ಟಾ ಸಮೀಪದ ನಾತಂಗಾಲ ಗ್ರಾಮದ ತೋಟದಲ್ಲಿ ಗುರುವಾರ ಕಾಡಾನೆ ದಾಳಿಗೆ ಕಾರ್ಮಿಕ ಯರವರ ಕರಿಯ (45) ಬಲಿಯಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. ಕೊಡಗಿನಲ್ಲಿ ಮತ್ತೆ ಕಾಫಿ ತೋಟಕ್ಕೆ ಕಾಡಾನೆಗಳು ಲಗ್ಗೆಯಿಡಲು ಆರಂಭಿಸಿದ್ದು ಅವುಗಳನ್ನು ಕಾಡಿಗೆ ಅಟ್ಟುವಂತೆ ಬೆಳೆಗಾರರು ಆಗ್ರಹಿಸಿದ್ದಾರೆ.

ಶ್ರೀಮಂಗಲ ಆರ್‌ಎಫ್‍ಒ ವೀರೇಂದ್ರ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT