ADVERTISEMENT

ವಿರಾಜಪೇಟೆ: ಕಾಡಾನೆ ದಾಳಿ; ಕಾರು ಜಖಂ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 4:05 IST
Last Updated 15 ಮಾರ್ಚ್ 2021, 4:05 IST
ವಿರಾಜಪೇಟೆ ಸಮೀಪದ ಕರಡ ಗ್ರಾಮದಲ್ಲಿ ಭಾನುವಾರ ಕಾಡಾನೆಯೊಂದು ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದೆ
ವಿರಾಜಪೇಟೆ ಸಮೀಪದ ಕರಡ ಗ್ರಾಮದಲ್ಲಿ ಭಾನುವಾರ ಕಾಡಾನೆಯೊಂದು ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದೆ   

ವಿರಾಜಪೇಟೆ: ಸಮೀಪದ ಕರಡ ಗ್ರಾಮದಲ್ಲಿ ಭಾನುವಾರ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಕಾರು ಜಖಂ ಗೊಂಡಿದೆ.

ಕಾರಿನಲ್ಲಿದ್ದ ಪಾರಂಗಾಲ ಗ್ರಾಮದ ಎಂ.ಅಶೋಕ ಅವರ ಕುಟುಂಬ ಅಪಾಯದಿಂದ ಪಾರಾಗಿದೆ. ಇಬ್ಬರು ಮಹಿಳೆಯರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದಿದ್ದಾರೆ.

ಕುಟುಂಬವು ಕರಡ ಗ್ರಾಮದ ಮಲೆತಿರಿಕೆ ಬೆಟ್ಟದಲ್ಲಿನ ದೇವಾಲಯಕ್ಕೆ ಪ್ರಯಾಣಿಸುತ್ತಿತ್ತು. ಬೆಟ್ಟದ ತಪ್ಪಲಿನ ಕಿರಿದಾದ ರಸ್ತೆಯಲ್ಲಿ ಸಾಗುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ನಾಲ್ವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಅಪಾಯದಿಂದ ತಪ್ಪಿಸಿಕೊಂಡರು. ಈ ಮಧ್ಯೆ ಆನೆಯು ದಂತದಿಂದ ಕಾರನ್ನು ಜಖಂಗೊಳಿಸಿತು. ದಾರಿಯಲ್ಲಿ ಸಾಗುತ್ತಿದ್ದ ನಾಗರಿಕರು ಕೂಗಿಕೊಂಡ ಪರಿಣಾಮ ಹೆಚ್ಚಿನ ಹಾನಿ ತಪ್ಪಿತು.

ADVERTISEMENT

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಕೆ.ಎಂ.ದೇವಯ್ಯ ಹಾಗೂ ಸಿಬ್ಬಂದಿ ಆಗಮಿಸಿ ಘಟನೆಯ ಕುರಿತುಮಾಹಿತಿ ಪಡೆದಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.