ADVERTISEMENT

ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಆತಂಕ

​ಪ್ರಜಾವಾಣಿ ವಾರ್ತೆ
Published 29 ಮೇ 2020, 15:02 IST
Last Updated 29 ಮೇ 2020, 15:02 IST
ಹೆದ್ದಾರಿ ದಾಟುತ್ತಿರುವ ಕಾಡಾನೆ ಹಿಂಡು
ಹೆದ್ದಾರಿ ದಾಟುತ್ತಿರುವ ಕಾಡಾನೆ ಹಿಂಡು   

ಮಡಿಕೇರಿ: ಸೋಮವಾರಪೇಟೆ- ಕುಶಾಲನಗರ ರಾಜ್ಯ ಹೆದ್ದಾರಿಯ ಕುಸುಬೂರು ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ಹೆದ್ದಾರಿಯಲ್ಲಿ ಕಾಡಾನೆ ಹಿಂಡು ಕಾಣಿಸಿಕೊಂಡು ಆತಂಕ ಮೂಡಿಸಿದವು.

ಗ್ರಾಮದ ತೋಟದಿಂದ 10 ಕಾಡಾನೆಗಳು ಕಾಡಿನತ್ತ ತೆರಳಿದವು. ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

ಕಾಡಾನೆಗಳು ಸಾಲಾಗಿ ಹೆದ್ದಾರಿ ದಾಟುವುದನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಅವುಗಳನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.