ಸಿದ್ದಾಪುರ: ಭಾರಿ ಮಳೆಗೆ ಬೃಹತ್ ಮರವೊಂದು ಮನೆಯ ಮೇಲೆ ಬಿದ್ದಿದೆ.
ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ಕಾಲೇಜು ಆವರಣದಲ್ಲಿದ್ದ ಬೃಹತ್ಗಾತ್ರದ ಮರವು ಮಾದಪ್ಪ ಅವರ ಮನೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಗೆ ಹಾನಿಯಾಗಿದೆ. ಕಾಲೇಜಿನ ತಡೆಗೋಡೆ ಕೂಡ ಕುಸಿದಿದೆ.
ಮರವನ್ನು ಕಡಿಯುವಂತೆ ಈ ಹಿಂದೆಯೇ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಗ್ರಾಮಲೆಕ್ಕಿಗ ಸಂತೋಷ್ ಹಾಗೂ ಪಿಡಿಒ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.