ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿಯ ಗಾಲ್ಫ್ ಮೈದಾನದ ಹೆಲಿಪ್ಯಾಡ್ ನಲ್ಲಿ ಅಗ್ನಿಶಾಮಕ ಪಡೆಯ ಸಿಬ್ಬಂದಿ ನೀರಿನ ಹೊಂಡವೊಂದರಲ್ಲಿ ಮುಳುಗುತ್ತಿದ್ದ ನಾಯಿಯನ್ನು ರಕ್ಷಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಗೆ ಬರಲಿರುವುದರಿಂದ ಅಗ್ನಿಶಾಮಕ ಪಡೆಯ ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಗಾಲ್ಫ್ ಮೈದಾನದ ಹೊಂಡದಲ್ಲಿ ನಾಯಿಯೊಂದು ಬಿದ್ದು ಹೊರ ಬರಲು ಪರದಾಡುತ್ತಿತ್ತು. ಈ ವೇಳೆ ಅಗ್ನಿಶಾಮಕ ಪಡೆಯ ಸಿಬ್ಬಂದಿ ರಕ್ಷಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.