ADVERTISEMENT

ಸಕಲೇಶಪುರ ಬಳಿ ಕಾಡಾನೆ ದಾಳಿಯಿಂದ ರೈತ ಸಾವು: ಸರ್ಕಾರ‌ದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 9:31 IST
Last Updated 8 ಆಗಸ್ಟ್ 2022, 9:31 IST
   

ಸಕಲೇಶಪುರ: ತಾಲ್ಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಭತ್ತದ ಗದ್ದೆಗೆ ಹೋಗುತ್ತಿದ್ದ ರೈತ ಮಂಜುನಾಥ್ (52) ಮೇಲೆ ಕಾಡಾನೆ ದಾಳಿ ನಡೆಸಿದ್ದು, ರೈತ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಶನಿವಾರ ಕಾಡಾನೆ ದಾಳಿಯಿಂದ ವೃದ್ಧರೊಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದೆ.
ನಿರಂತರ ಆನೆ‌ ದಾಳಿಯಿಂದ ಜೀವ ಹಾನಿ ಖಂಡಿಸಿ ವಿವಿಧ ಸಂಘಟನೆಗಳು ಸಕಲೇಶಪುರದಲ್ಲಿ ಅಂಗಡಿ ಮುಂಗಟ್ಟುಗಳ ಬಾಗಿಲು ಬಂದ್ ಮಾಡಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು.

ಮೊದಲೇ ಅತಿವೃಷ್ಟಿಯಿಂದ ತತ್ತರಿಸಿದ್ದೇವೆ‌. ಕಾಡಾನೆ ದಾಳಿಯಿಂದ ಮನೆಯಿಂದ ಹೊರಗೆ ಬರದ ಸ್ಥಿತಿ ನಿರ್ಮಾಣವಾಗಿದೆ. ಕಾಡಾನೆ ಉಪಟಳದಿಂದ ಶಾಶ್ವತ ಮುಕ್ತಿ ಕೊಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.