ADVERTISEMENT

60 ಅಡಿ ಪ್ರಪಾತಕ್ಕೆ ಜಾರಿ ಬಿದ್ದು ಅರಣ್ಯ ವೀಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 11:07 IST
Last Updated 10 ನವೆಂಬರ್ 2022, 11:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಡಿಕೇರಿ: ಇಲ್ಲಿನ ಭಾಗಮಂಡಲದ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಎಂಬಲ್ಲಿ ದಟ್ಟ ಕಾಡಿನ ನಡುವೆ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಆಕಸ್ಮಿಕವಾಗಿ ಬಿದ್ದು ಅರಣ್ಯ ವೀಕ್ಷಕ ಚಿಣ್ಣಪ್ಪ (57) ಮೃತಪಟ್ಟಿದ್ದಾರೆ.

ಇವರು ಇತರೆ ಮೂವರು ಸಿಬ್ಬಂದಿಯೊಂದಿಗೆ ಬೆಳಿಗ್ಗೆಯಿಂದಲೇ ಗಸ್ತು ಕಾರ್ಯ ಆರಂಭಿಸಿದ್ದರು. ನಿಗದಿತ ಗಸ್ತು ಪೂರೈಸುವಷ್ಟರಲ್ಲಿ ಕತ್ತಲಾಗಿ ದಾರಿ ತಪ್ಪಿದ್ದಾರೆ. ಜತೆಯಲ್ಲಿ ತಂದಿದ್ದ ನೀರೂ ಮುಗಿದು, ಬಂಡೆಯ ನಡುವೆ ಹರಿಯು ತ್ತಿದ್ದ ಝರಿಯಲ್ಲಿ ನೀರು ಕುಡಿಯಲು ಯತ್ನಿಸಿದ್ದಾರೆ. ಆದರೆ, ಕಾಲು ಜಾರಿ ಬಂಡೆಯ ಕೆಳಗೆ ತೂರಿ ರಕ್ಷಿಸುವಂತೆ ಕೂಗಿಕೊಂಡಿದ್ದಾರೆ. ಇಬ್ಬರು ಸಿಬ್ಬಂದಿ ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಜಲಪಾತದಂತಿದ್ದ ಪ್ರಪಾತಕ್ಕೆ ಚಿಣ್ಣಪ್ಪ ಬಿದ್ದು ಸ್ಥಳದಲ್ಲೇ ಮೃತಪಟ್ಟರು.

ಜತೆಯಲ್ಲಿದ್ದ ಸಿಬ್ಬಂದಿ ಕಾಡಿನಿಂದ ಹೊರಬರುವ ಹೊತ್ತಿಗೆ ನಸುಕು 4 ಗಂಟೆ ದಾಟಿತ್ತು. ನಂತರ, ಕಾರ್ಯಾಚರಣೆ ಕೈಗೊಂಡು ಮೃತದೇಹವನ್ನು ಪತ್ತೆ ಹ ಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಭಾಗಮಂಡಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.