ADVERTISEMENT

ಕಿರು ಸೇತುವೆ ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 12:06 IST
Last Updated 7 ನವೆಂಬರ್ 2019, 12:06 IST
ವಿರಾಜಪೇಟೆ ಪಟ್ಟಣದ ಮಾಂಸ ಮಾರುಕಟ್ಟೆ ಬಳಿಯಲ್ಲಿ ನೂತನ ಕಿರು ಸೇತುವೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಗುದ್ದಲಿ ಗುರುವಾರ ಪೂಜೆ ನೆರವೇರಿಸಿದರು
ವಿರಾಜಪೇಟೆ ಪಟ್ಟಣದ ಮಾಂಸ ಮಾರುಕಟ್ಟೆ ಬಳಿಯಲ್ಲಿ ನೂತನ ಕಿರು ಸೇತುವೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಗುದ್ದಲಿ ಗುರುವಾರ ಪೂಜೆ ನೆರವೇರಿಸಿದರು   

ವಿರಾಜಪೇಟೆ: ಪಟ್ಟಣದ ಗೋಣಿಕೊಪ್ಪಲು ರಸ್ತೆಯ ಮಾಂಸ ಮಾರುಕಟ್ಟೆ ಬಳಿಯಲ್ಲಿ ನೂತನ ಕಿರು ಸೇತುವೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಗುರುವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಪ್ರತಿ ವರ್ಷದ ಮಳೆಗಾಲದಲ್ಲಿ ಪ್ರಸ್ತುತ ಇರುವ ಕಿರುಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಇದಕ್ಕಾಗಿ ₹32 ಲಕ್ಷದ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು ತಕ್ಷಣದಿಂದ ಕಾಮಗಾರಿ ಆರಂಭವಾಗಲಿದೆ ಎಂದರು.
ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಎಂ.ಸುರೇಶ್, ಯತೀಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್, ಪಟ್ರಪಂಡ ರಘು ನಾಣಯ್ಯ, ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT