ADVERTISEMENT

ಪ್ರಿಯಕರನ ಹಿಂಸೆ ತಾಳಲಾರದೆ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 10:44 IST
Last Updated 16 ಜನವರಿ 2020, 10:44 IST
   

ಕುಶಾಲನಗರ: ಪ್ರಿಯಕರನ ಕಾಟ ತಾಳದೆಬ್ಯಾಡಗೊಟ್ಟ ಗ್ರಾಮದ ನಿವಾಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವತಿ ಹಾಗೂ ಕೂಡ್ಲೂರು ಗ್ರಾಮದ ಯುವಕ ಪವನ್ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಪೋಷಕರು, ಯುವತಿಯನ್ನು ಸುಳ್ಯದ ಖಾಸಗಿ ಕಾಲೇಜಿಗೆ ಸೇರಿಸಿದ್ದರು. ಆದರೆ, ಪವನ್‌ ಪದೇ ಪದೇ ಪೂಜಾಳಿಗೆ ಕರೆ ಮಾಡುತ್ತಿದ್ದ. ಈ ವಿಚಾರವನ್ನು ಯುವತಿ ತನ್ನಪೋಷಕರಿಗೆ ತಿಳಿಸಿದ್ದರು. ನಂತರ ಪೋಷಕರು ಮಗಳನ್ನುಕಾಲೇಜು ಬಿಡಿಸಿ ಮನೆಯಲ್ಲೇ ಇರಿಸಿದ್ದರು. ಆದರೂ ಪವನ್‌ ಫೋನ್‌ ಮಾಡುವುದನ್ನು ನಿಲ್ಲಿಸಿರಲಿಲ್ಲ.

ಮಾನಸಿಕವಾಗಿ ನೊಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳ ಸಾವಿಗೆ ಪವನ್‌ ಕಾರಣ ಎಂದು ಆಕೆ ಪೋಷಕರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.