
ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ₹3.80 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಳಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ತಿತಿಮತಿ ಸೇತುವೆಯಿಂದ ದೇವರಪುರದವರೆಗಿನ ಈ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ತಿತಿಮತಿ ಪಟ್ಟಣ ವ್ಯಾಪ್ತಿಯಲ್ಲಿ ನೆರವೇರಿಸಿದರು. ಬಳಿಕ ಮಾತನಾಡಿ ಈ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಅತಿ ಶೀಘ್ರದಲ್ಲಿ ಮುಗಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು. ಅತ್ಯಂತ ಹೆಚ್ಚು ವಾಹನ ದಟ್ಟಣೆ ಇರುವ ಪ್ರಮುಖ ರಸ್ತೆ ಇದಾಗಿರುವುದರಿಂದ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಲಸ ಮಾಡುವಂತೆ ಸೂಚನೆ ನೀಡಿದರು.
ದೇವರಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ನೆರವೇರಿಸಿದರು. ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯ ರಸ್ತೆಯ, ಬಾಲಾಜಿಯಿಂದ ಜೋಡುಬೀಟಿ (ಮಾಯಮುಡಿ-ಬಾಲಾಜಿ-ಜೋಡುಬೀಟಿ -ಕುಂದ) ಭಾಗದಲ್ಲಿ ₹1 ಕೋಟಿ ಅನುದಾನದಲ್ಲಿ, ರಸ್ತೆ ಅಗಲೀಕರಣ ಹಾಗೂ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು. ಈ ಕಾಮಗಾರಿಗೆ ಭೂಮಿ ಪೂಜೆಯನ್ನು ಜೋಡುಬೀಟಿ ಭಾಗದಲ್ಲಿ ಪೂರೈಸಿದರು.
ಹುದಿಕೇರಿಯಲ್ಲಿ ₹5 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಹುದಿಕೇರಿ-ಕಳತ್ತೋಡು ನೂತನ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಹುದಿಕೇರಿಯ ಮುಕ್ಕಾಟಿಮಾನಿಯಲ್ಲಿ ₹42 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ 11 ಕೆವಿ ವಿದ್ಯುತ್ ಮಾರ್ಗಕ್ಕೆ ಚಾಲನೆ ನೀಡಿದರು.
ಬಳಿಕ ಮಡಿಕೇರಿ-ಕುಟ್ಟ ರಸ್ತೆಯ ಹುದಿಕೇರಿ ಬಳಿ ಪೊಕಳೆತೋಡು ಭಾಗದಲ್ಲಿರುವ ಸೇತುವೆಯ ಮರು ನಿರ್ಮಾಣಕ್ಕಾಗಿ ₹2 ಕೋಟಿ ಅನುದಾನವನ್ನು ಶಾಸಕರು ಒದಗಿಸಿದ್ದು, ಈ ಕಾಮಗಾರಿಗೆ ಭೂಮಿ ಪೂಜೆಯನ್ನು ಪೂಕಳೆತೋಡು ಬಳಿ ನೆರವೇರಿಸಿದರು.
ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷರಾದ ಮೀದೇರಿರ ನವೀನ್, ತಾಲ್ಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ, ವಲಯ ಅಧ್ಯಕ್ಷ ನವೀನ್, ದೇವರಪುರ ವಲಯ ಅಧ್ಯಕ್ಷ ಬಸಂತ್, ಹುದಿಕೇರಿ ವಲಯ ಅಧ್ಯಕ್ಷ ಚಂಗುಲಂಡ ಸೂರಜ್, ಬೆನ್ನಿ, ಅಣ್ಣಳಮಾಡ ಹರೀಶ್, ಡಾ. ಮಧ್ಯಸ್ತಾ, ಮಣಿಕಂಠ, ಪಿ.ಸಿ. ರಾಮು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪಂಕಜ, ರಜನಿ, ಪುಷ್ಪ, ರವಿನಾ, ಸತೀಶ್, ಕಳ್ಳಿಚಂಡ ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯ ಚುಬ್ರು, ನವೀನ್, ಚೆಕ್ಕೇರ ವಾಸು ಕುಟ್ಟಪ್ಪ, ಮನೋಹರ್, ರಮೇಶ್, ರೀಕ್ಷಿತ್ ಕಾರ್ಯಪ್ಪ, ಅಜ್ಜಿಕುಟ್ಟಿರ ಪಮು , ಅಜ್ಜಿಕುಟ್ಟಿರ ಗಿರೀಶ್, ಮಂದಣ್ಣ, ಅಜ್ಜಿಕುಟ್ಟಿರ ಪೊನ್ನು, ಚೆಕ್ಕೇರ ಸುಧೀರ್, ಅಪ್ಪಚಂಗಡ ಮೋಟಯ್ಯ, ದಿಲು, ಚೊಟ್ಟೆಯಾಠಡಮಾಡ ವಿಶು, ಉದಯ, ಮಧು ತಮ್ಮಯ್ಯ, ಕರುಂಬಯ್ಯ, ಕಿರಿಯಮಡ ಗಣೇಶ್, ಪಕ್ಷದ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.