ADVERTISEMENT

ವಿರಾಜಪೇಟೆ: ಹನುಮ ಜಯಂತಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 4:20 IST
Last Updated 24 ಏಪ್ರಿಲ್ 2024, 4:20 IST
ವಿರಾಜಪೇಟೆಯ ಛತ್ರಕೆರೆ ಬಳಿಯಿರುವ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು
ವಿರಾಜಪೇಟೆಯ ಛತ್ರಕೆರೆ ಬಳಿಯಿರುವ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು   

ವಿರಾಜಪೇಟೆ: ಪಟ್ಟಣದ ಛತ್ರಕೆರೆ ಬಳಿ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಹನುಮ ಜಯಂತಿ  ಆಚರಿಸಲಾಯಿತು.

 ಮಂಗಳವಾರ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು. ಮಧ್ಯಾಹ್ನ 12ಕ್ಕೆ ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆ ನಡೆಯಿತು. ದೇವಾಲಯದಿಂದ ಮಧ್ಯಾಹ್ನ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿ ಸೇರಿ ಸದಸ್ಯರು, ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಭಕ್ತರು ಉಪಸ್ಥಿತರಿದ್ದರು. ಈ ಸಂದರ್ಭ ವಿನಾಯಕ ಭಜನಾ ಮಂಡಳಿ ಸದಸ್ಯರು ದೇವರ ನಾಮ ಕೀರ್ತನೆಯನ್ನು ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT