ADVERTISEMENT

ಕುಶಾಲನಗರ; ಸಡಗರದ ಮಕರ ಸಂಕ್ರಾಂತಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2024, 15:25 IST
Last Updated 15 ಜನವರಿ 2024, 15:25 IST

ಕುಶಾಲನಗರ: ಎಳ್ಳು, ಬೆಲ್ಲ ಹಂಚುವ ಮೂಲಕ ಮಾನವೀಯತೆಯ ಸಂಬಂಧ ಬೆಸೆಯುವ ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಾಂತಿ ಹಬ್ಬವನ್ನು ಪಟ್ಟಣದಲ್ಲಿ ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಅಂಗವಾಗಿ ಪಟ್ಟಣದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ರೈತರು ತಮ್ಮ ಜಾನುವಾರುಗಳ ಮೈತೊಳೆದು, ಸಿಂಗರಿಸಿ ಮೆರವಣಿಗೆ ಮಾಡಿ‌ ಮೃಷ್ಟಾನ್ನವನ್ನು ಉಣಬಡಿಸಿ ಸಂತಸಪಟ್ಟರು.

ADVERTISEMENT

ಮಹಿಳೆಯರು ಮತ್ತು ಮಕ್ಕಳು ಹೊಸ ಉಡುಗೆ ತೊಡುಗೆ ಧರಿಸಿ ಎಳ್ಳು, ಬೆಲ್ಲ ಹಂಚಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಿ ಎಂದು ಶುಭ ಹಾರೈಸಿದರು.

ಮನೆಗಳಲ್ಲಿ ಹಬ್ಬದ ವಿಶೇಷವಾದ ಸಿಹಿ ಪೊಂಗಲ್ ಸೇರಿದಂತೆ ವಿವಿಧ ಭಕ್ಷ್ಯ ಭೋಜನಗಳನ್ನು ಸಿದ್ಧಪಡಿಸಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಒಟ್ಟಾಗಿ ಸವಿದು ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.