ಮಡಿಕೇರಿ: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ, ಕೊಡಗು ಜಿಲ್ಲೆಯ ಮುಸ್ಲಿಂ ವರ್ತಕರು ಗುರುವಾರ ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.
ಮಡಿಕೇರಿಯ ಚೌಕಿ, ರೇಸ್ ಕೋರ್ಸ್ ರಸ್ತೆ, ಕಾಲೇಜು ರಸ್ತೆ, ತಿಮ್ಮಯ್ಯ ವೃತ್ತದಲ್ಲಿನ ಮೊಬೈಲ್ ಅಂಗಡಿ, ತರಕಾರಿ ಮಾರಾಟ ಅಂಗಡಿ, ಬಟ್ಟೆ, ದಿನಸಿ, ಸ್ಪೈಸಸ್ ಮಳಿಗೆ, ಹೋಟೆಲ್ಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.
ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ಸೋಮವಾರಪೇಟೆಯಲ್ಲೂ ಶಾಂತಿಯುತ ಬಂದ್ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.