ADVERTISEMENT

ಮಡಿಕೇರಿ | ಸಂವಿಧಾನದ ಮಹತ್ವ: ಪ್ರಬಂಧ, ಚಿತ್ರಕಲಾ ಸ್ಪರ್ಧೆಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 2:26 IST
Last Updated 16 ಫೆಬ್ರುವರಿ 2024, 2:26 IST
ಕೊಡಗು ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ
ಕೊಡಗು ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ   

ಮಡಿಕೇರಿ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾಡಳಿತವು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದೆ.

‘ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ.’ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ (ಭಾರತ ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಹಿನ್ನಲೆಯಲ್ಲಿ)’ ಸ್ಪರ್ಧೆಯು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತವಾಗಿ ನಡೆಯಲಿದೆ.

ಪ್ರಬಂಧ ಸ್ಪರ್ಧೆಗೆ ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ಸ್ಫುಟವಾದ ಕೈಬರಹಗಳಲ್ಲಿ ‘ಎ4’ ಅಳತೆಯ ಕಾಗದಗಳಲ್ಲಿ 1,500 ಪದಗಳಿಗೆ ಮೀರದಂತೆ ಬರೆದು ಕಳುಹಿಸಬೇಕು.

ADVERTISEMENT

ಚಿತ್ರಕಲಾ ಸ್ಪರ್ಧೆಗೆ ಸಂಬಂಧಿಸಿದಂತೆ ನೀಡಿರುವ ವಿಷಯಗಳ ಬಗ್ಗೆ ‘ಎ3’ ಅಳತೆಯ ಡ್ರಾಯಿಂಗ್ ಶೀಟ್‍ನಲ್ಲಿ ಚಿತ್ರ ರಚನೆ ಮಾಡಿ ಸಲ್ಲಿಸಬೇಕು.

ಪ್ರಬಂಧ ಸ್ಪರ್ಧೆಯ ಪ್ರಬಂಧಗಳನ್ನು ಹಾಗೂ ಚಿತ್ರಕಲಾ ಸ್ಪರ್ಧೆಯ ಚಿತ್ರಗಳನ್ನು ಫೆ. 25 ರಂದು ಸಂಜೆ 4.30 ರ ಒಳಗೆ ‘ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ ಹತ್ತಿರ, ಎಸ್.ಜಿ.ಎಸ್.ವೈ ಕಟ್ಟಡ, ಕೊಡಗು ಜಿಲ್ಲೆ, ಮಡಿಕೇರಿ. ದೂ: 08272-225531 ಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ತಲುಪಿಸಬೇಕು.

ಕೊನೆಯ ದಿನಾಂಕದ ನಂತರ ಬರುವ ಪ್ರಬಂಧಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಪ್ರಥಮ ₹ 5 ಸಾವಿರ, ದ್ವಿತೀಯ ₹ 3 ಸಾವಿರ ಹಾಗೂ ತೃತೀಯ ₹ 2 ಸಾವಿರ ನಗದು ಬಹುಮಾನ ನೀಡಲಾಗುವುದು. ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದಚಿತ್ರ
ಮಾಹಿತಿಗೆ ದೂ: 08272-225531  ಪ್ರಥಮ ಬಹುಮಾನ ₹ 5 ಸಾವಿರ, ದ್ವಿತೀಯ ₹ 3 ಸಾವಿರ, ತೃತೀಯ ₹ 2 ಸಾವಿರ ನಗದು ಬಹುಮಾನ
ಆನ್‌ಲೈನ್ ರಸಪ್ರಶ್ನೆ
‘ಸಂವಿಧಾನ ಜಾಗೃತಿ ಜಾಥಾ’ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆನ್‌ಲೈನ್ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಭಾರತ ಸಂವಿಧಾನದ ಕುರಿತಂತೆ ಪ್ರಶ್ನಾವಳಿಗಳನ್ನು ಸಿದ್ಧಪಡಿಸಲಾಗಿದೆ. ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಫಾರ್ಮ್‌ನಲ್ಲಿ ಕೋರಿರುವ ಮಾಹಿತಿಯನ್ನು ಭರ್ತಿ ಮಾಡಿ ನೀಡಿರುವ ಬಹು ಆಯ್ಕೆ ಮಾದರಿಯ ಪ್ರಶ್ನಾವಳಿಗಳಿಗೆ ಉತ್ತರಿಸಬಹುದು. ಕೊಡಗು ಜಿಲ್ಲಾ ಆಡಳಿತ ವತಿಯಿಂದ ಆಯೋಜಿಸಲಾಗಿರುವ ಈ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಥಿಗಳು ಸಾರ್ವಜನಿಕರು ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಎಲ್ಲರೂ ಪಾಲ್ಗೊಳ್ಳಬಹುದು ಎಂದು ‍ಪ್ರಕಟಣೆ ತಿಳಿಸಿದೆ. ಗೂಗಲ್ ಫಾರ್ಮ್: https://docs.google.com/forms/d/e/1FAIpQLSeMwBb4X2QOcFl8T2g6bpg1o_rolbeY4puf5a8WIq0DIfqfMQ/viewform?usp=sf_link
21ರಂದು ಮಡಿಕೇರಿಗೆ
‘ಸಂವಿಧಾನ ಜಾಗೃತಿ ಜಾಥಾ’ ಜಿಲ್ಲಾಡಳಿತದ ವತಿಯಿಂದ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ‘ಸಂವಿಧಾನ ಜಾಗೃತಿ ಜಾಥಾ’ ಫೆ. 21ರಂದು ಮಡಿಕೇರಿಗೆ ಆಗಮಿಸಲಿದೆ. ಜಾಥಾದಲ್ಲಿ ಭಾಗಿಯಾಗಿರುವ ಸ್ತಬ್ದಚಿತ್ರಕ್ಕೆ ಸ್ವಾಗತ ಕೋರಿ ಕಾವೇರಿ ಕಲಾಕ್ಷೇತ್ರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.