ADVERTISEMENT

ಮಡಿಕೇರಿಯಲ್ಲಿ ಜನಪದ ಕಲರವ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 6:54 IST
Last Updated 2 ಅಕ್ಟೋಬರ್ 2022, 6:54 IST

ಮಡಿಕೇರಿ: ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ದಸರಾ ಉತ್ಸವದಲ್ಲಿ ಭಾನುವಾರ ಜಾನಪದ ದಸರಾ ಆರಂಭಗೊಂಡಿತು.

ಮಡಿಕೇರಿ ನಗರ ದಸರಾ ಸಮಿತಿ, ಕೊಡಗು ಜಿಲ್ಲಾ ಜಾನಪದ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ಏರ್ಪಡಿಸಿರುವ ಜಾನಪದ ದಸರಾವನ್ನು ಜಾನಪದ ವಿದ್ವಾಂಸರಾದ ಹಿ.ಶಿ.ರಾಮಚಂದ್ರೇಗೌಡ ಉದ್ಘಾಟಿಸಿದರು.

ಇದಕ್ಕೂ ಮುನ್ನ ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಜನಪದ ಕಲಾತಂಡಗಳ ಮೆರವಣಿಗೆ ನಡೆಯಿತು. ಜತೆಗೆ, ಕೊಡಗಿನಲ್ಲಿ ಬಳಕೆಯಲ್ಲಿದ್ದ ಜನಪದ ವಸ್ತುಗಳ ಪ್ರದರ್ಶನವೂ ಉದ್ಘಾಟನೆಗೊಂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.