ADVERTISEMENT

ವಿಧಾನ ಪರಿಷತ್‌ಗೆ ವಿಶ್ವನಾಥ್‌ ಆಯ್ಕೆ ವಿಚಾರ: ‘ಬಿಜೆಪಿ ನಾಯಕರು ಮಾತಿಗೆ ತಪ್ಪಲ್ಲ’

​ಪ್ರಜಾವಾಣಿ ವಾರ್ತೆ
Published 30 ಮೇ 2020, 11:50 IST
Last Updated 30 ಮೇ 2020, 11:50 IST
   

ಮಡಿಕೇರಿ: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ವರಿಷ್ಠರು ಕೊಟ್ಟ ಮಾತಿಗೆ ತಪ್ಪುವುದಿಲ್ಲ’ ಎಂದು ಸಚಿವ ಕೆ.ಗೋಪಾಲಯ್ಯ ಇಲ್ಲಿ ಶನಿವಾರ ಹೇಳಿದರು.

ಅಡಗೂರು ಎಚ್‌.ವಿಶ್ವನಾಥ್‌, ಎಂ.ಟಿ.ಬಿ.ನಾಗರಾಜ್‌, ಆರ್‌.ಶಂಕರ್‌ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,‘ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೇ ನಾವು ಸಚಿವರಾಗಿರುವುದು’ ಎಂದು ತಿಳಿಸಿದರು.

‘ಬಿಜೆಪಿ ರಾಷ್ಟ್ರೀಯ ಪಕ್ಷ. ಕೇಂದ್ರದಿಂದ ಬರುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ರಾಜ್ಯ ಹಾಗೂ ಕೇಂದ್ರದಲ್ಲಿ ವರಿಷ್ಠ ಮಂಡಳಿಯಿದ್ದು ದೊಡ್ಡವರು ನೋಡಿಕೊಳ್ಳುತ್ತಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.