ಸುಂಟಿಕೊಪ್ಪ: ರಾಷ್ಟ್ರೀಯ ವೋವಿನಮ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಸೋಮವಾರಪೇಟೆ ಕುವೆಂಪು ಶಾಲೆಯ ವಿದ್ಯಾರ್ಥಿನಿ ಜಿ.ಎಸ್. ಮಾನಸ ಕಂಚಿನ ಪದಕ ಪಡೆಯುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ.
ಹೈದಾರಬಾದ್ನಲ್ಲಿ ನಡೆದ 12ನೇ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಈ ಸಾಧನೆ ತೋರಿದ್ದಾರೆ.
ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕರಾಟೆ ತರಬೇತುದಾರ ಎನ್.ಸಿ. ಸುದರ್ಶನ್ ತರಬೇತಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.