ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಬಿರುಸು ತಗ್ಗಿದ್ದರೂ ಗಾಳಿಯ ಅಬ್ಬರ ಕಡಿಮೆಯಾಗಿಲ್ಲ. ಬಿರುಗಾಳಿಗೆ ಹಲವೆಡೆ ಮರಗಳು ಬುಡಮೇಲಾಗಿವೆ.
ಕೊಡ್ಲಿಪೇಟೆ– ಸೋಮವಾರಪೇಟೆ ಮುಖ್ಯರಸ್ತೆಗೆ ಮರ ಉರುಳಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿರಾಜಪೇಟೆ ಹೋಬಳಿ ಪೊದಕೋಟೆ ಗ್ರಾಮದಲ್ಲಿ ಮನೆ ಕುಸಿದಿದೆ. ಹಾರಂಗಿ ಜಲಾಶಯದ ಹೊರ ಹರಿವನ್ನು 3 ಸಾವಿರ ಕ್ಯುಸೆಕ್ನಿಂದ 5 ಸಾವಿರ ಕ್ಯುಸೆಕ್ಗೆ ಹೆಚ್ಚಿಸಲಾಗಿದೆ.
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ 12 ಸೆಂ.ಮೀ, ಸೋಮವಾರಪೇಟೆ 7, ಭಾಗಮಂಡಲ, ಹುದಿಕೇರಿ 6, ಶನಿವಾರಸಂತೆಯಲ್ಲಿ 5 ಸೆಂ.ಮೀನಷ್ಟು ಮಳೆಯಾಗಿದೆ. ಜೂನ್ 25ರಂದು ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.