ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯಿಂದ ಕಾಫಿ ಬೆಳೆಗಾರರು ಪರದಾಡುವಂತಾಗಿದೆ.
ಮಡಿಕೇರಿಯಲ್ಲಿ ಒಂದು ಗಂಟೆ ಮಳೆ ಅಬ್ಬರಿಸಿತು. ವಿರಾಜಪೇಟೆ, ಗೋಣಿಕೊಪ್ಪಲು, ಬಾಳೆಲೆ, ದೇವರಪುರ, ತಾಳತ್ತಮನೆ, ಕಾಟಕೇರಿ, ಗಾಳಿಬೀಡು, ಮಾದಾಪುರ, ಭಾಗಮಂಡಲ ಸುತ್ತಮುತ್ತ ಮಳೆಯಾಗಿದೆ.
ಕೊಡಗಿನಲ್ಲಿ ಕಾಫಿ ಹಾಗೂ ಭತ್ತದ ಕೊಯ್ಲು ನಡೆಯುತ್ತಿದ್ದು ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ನಷ್ಟವಾಗಿದೆ. ಕಾಫಿ ಒಣಗಿಸಲು ಸಾಧ್ಯವಾಗದೆ ಬೆಳೆಗಾರರು ಪರದಾಡುವ ಸ್ಥಿತಿಯಿದೆ. ಕೊಯ್ಲು ಮಾಡದೆ ಉಳಿದಿರುವ ಕಾಫಿ ಹಣ್ಣು ನೆಲದ ಪಾಲಾಗುತ್ತಿದೆ. ಅಕಾಲಿಕ ಮಳೆಯಿಂದ ಕಾಫಿ ಕೊಯ್ಲಿಗೂ ಮುನ್ನವೇ ಹೂವು ಅರಳಿ ಮುಂದಿನ ವರ್ಷದ ಇಳುವರಿಯ ಮೇಲೂ ಪರಿಣಾಮ ಬೀರಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.