ADVERTISEMENT

ಕಿಸಾನ್ ಸಮ್ಮಾನ್ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 14:37 IST
Last Updated 11 ಏಪ್ರಿಲ್ 2021, 14:37 IST

ಕುಶಾಲನಗರ: ಸೋಮವಾರಪೇಟೆ ತಾಲ್ಲೂಕಿನ ಹೆಬ್ಬಾಲೆ ಗ್ರಾಮದ ಸಂತೆ ಮಾರುಕಟ್ಟೆ ಆವರಣದಲ್ಲಿಸೋಮವಾರ (ಏ.12) ಮಧ್ಯಾಹ್ನ 3 ಗಂಟೆಗೆ ಬಿಜೆಪಿ ರೈತ ಮೋರ್ಚಾ ಸೋಮವಾರಪೇಟೆ ಮಂಡಲದ ವತಿಯಿಂದ ತಾಲ್ಲೂಕುಮಟ್ಟದ ಕಿಸಾನ್ ಸಮ್ಮಾನ್ ಸಮಾವೇಶ ಆಯೋಜಿಸಲಾಗಿದೆ.

ಸಮಾವೇಶದಲ್ಲಿ ಮಣ್ಣು ಮತ್ತು ನೀರು ಸಂರಕ್ಷಣಾ ಅಭಿಯಾನ 2021ರ ಅಂಗವಾಗಿ ಭೂ ಪೋಷಣಾ ಮತ್ತು ಜಲ ಸಂರಕ್ಷಣೆ ಕುರಿತು ಉಪನ್ಯಾಸ ಮತ್ತು ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ರೈತರಿಗೆ ನೀರಿನ ಮಿತಬಳಕೆ, ಭೂ ಸಂರಕ್ಷಣೆ ಕುರಿತು ಮಾಹಿತಿ ಮತ್ತು ಸಂವಾದ ಇರಲಿದೆ.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪಕ್ಷದ ಪ್ರಮುಖರು ಹಾಗೂ ರೈತ ಮುಖಂಡರು ಭಾಗವಹಿಸಿದ್ದಾರೆ. ಹೆಬ್ಬಾಲೆ, ತೊರೆನೂರು, ಶಿರಂಗಾಲ, ಕೂಡಿಗೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ
ರೈತರು ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ತಾಲ್ಲೂಕು ರೈತ ಮೋರ್ಚಾ ಅಧ್ಯಕ್ಷ ಟಿ.ಬಿ.ಜಗದೀಶ್ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.