ADVERTISEMENT

ಮಡಿಕೇರಿಯ ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ: ಅಪಾರ ಹಾನಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 2:37 IST
Last Updated 20 ಫೆಬ್ರುವರಿ 2023, 2:37 IST
ಅಗ್ನಿ ಅವಘಡ
ಅಗ್ನಿ ಅವಘಡ    

ಮಡಿಕೇರಿ: ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಶಾಂತ್ ಫರ್ನಿಚರ್ ಅವರ ದಾಸ್ತಾನು ಮಳಿಗೆಗೆ ಸೋಮವಾರ ನಸುಕಿನಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮರದ ಪೀಠೋಪಕರಣಗಳು ಉರಿದು ಭಸ್ಮವಾಗಿವೆ.

ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರದಿಂದಲೂ ಅಗ್ನಿಶಾಮಕ ಸಿಬ್ಬಂದಿ ಬಂದು 4 ವಾಹನಗಳಲ್ಲಿ ಬೆಂಕಿ ನಂದಿಸಲು ಯತ್ನಿಸಲಾಗುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT