ಮಡಿಕೇರಿ: ಇಲ್ಲಿನ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಶಾಂತ್ ಫರ್ನಿಚರ್ ಅವರ ದಾಸ್ತಾನು ಮಳಿಗೆಗೆ ಸೋಮವಾರ ನಸುಕಿನಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮರದ ಪೀಠೋಪಕರಣಗಳು ಉರಿದು ಭಸ್ಮವಾಗಿವೆ.
ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರದಿಂದಲೂ ಅಗ್ನಿಶಾಮಕ ಸಿಬ್ಬಂದಿ ಬಂದು 4 ವಾಹನಗಳಲ್ಲಿ ಬೆಂಕಿ ನಂದಿಸಲು ಯತ್ನಿಸಲಾಗುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.