ADVERTISEMENT

ಕೊಡಗು: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವ ನಾಗೇಶ್ ಭೇಟಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 9:54 IST
Last Updated 24 ಜುಲೈ 2022, 9:54 IST
ಕೊಡಗು: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವ ನಾಗೇಶ್ ಭೇಟಿ
ಕೊಡಗು: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವ ನಾಗೇಶ್ ಭೇಟಿ   

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ‌ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಜಿಲ್ಲೆಯಲ್ಲಿ‌ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದಿನ ತಡೆಗೋಡೆ ಕುಸಿತ ನೋಡಲು ತೆರಳಿದ್ದ ಅವರಲ್ಲಿ ಸ್ಥಳೀಯರು ವಾಹನ ಸಂಚಾರ ನಿಷೇಧಿಸದೆ ದುರಸ್ತಿ ಕಾರ್ಯ ನಡೆಸುವಂತೆ ಮನವಿ ಮಾಡಿದರು.

ಮಡಿಕೇರಿ ಒಂದು ಕಿ.ಮೀ ದೂರವಷ್ಟೆ ಇದೆ. ಆದರೆ ವಾಹನ ಸಂಚಾರ ನಿಷೇಧಿಸಿರುವುದರಿಂದ 10 ಕಿ.ಮೀ ದೂರ ಪ್ರಯಾಣ ಮಾಡಬೇಕಿದೆ ಎಂದು ಅಳಲು ತೋಡಿಕೊಂಡರು.

ADVERTISEMENT

ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸಚಿವರು‌ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಗುಡ್ಡದ ಒಂದು ಪಾರ್ಶ್ವ ಕುಸಿದಿದ್ದ ಮದೆನಾಡಿಗೂ ಭೇಟಿ‌ ನೀಡಿದ ಅವರು ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.