ADVERTISEMENT

ಕೊಡಗು: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2024, 4:24 IST
Last Updated 31 ಮಾರ್ಚ್ 2024, 4:24 IST
<div class="paragraphs"><p>ಕಾಡಾನೆ (ಪ್ರಾತಿನಿಧಿಕ ಚಿತ್ರ)</p></div>

ಕಾಡಾನೆ (ಪ್ರಾತಿನಿಧಿಕ ಚಿತ್ರ)

   

ಶನಿವಾರಸಂತೆ: ಇಲ್ಲಿಗೆ ಸಮೀಪದ ಹೊಸಗುತ್ತಿ ಗ್ರಾಮದ ಜಗದೀಶ್ ಕಾಂತ (45 ) ಎಂಬುವವರು ಭಾನುವಾರ ಬೆಳಿಗ್ಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ತಮ್ಮ ಜಮೀನಿಗೆ ಹೋಗುತ್ತಿರುವ ವೇಳೆ ಕಾಡಾನೆ ಎದುರಾಗಿ ಇವರ ಮೇಲೆ ದಾಳಿ ನಡೆಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT

ಘಟನೆ ನಡೆದ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.