ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಅಬ್ಬರ ಮುಂದುವರಿದಿದೆ.
ಕಾವೇರಿ ನದಿ ಸೇರಿದಂತೆ ಹಳ್ಳ, ಕೊಳ್ಳಗಳಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ಹಾರಂಗಿ ಒಳಹರಿವು 760 ಕ್ಯುಸೆಕ್ನಿಂದ 3,285 ಕ್ಯುಸೆಕ್ಗೆ ಏರಿಕೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಯಾಗಿದ್ದು, ಇಂದಿನ ನೀರಿನಮಟ್ಟ 2,850 ಅಡಿಗೆ ತಲುಪಿದೆ. ಜಲಾಶಯದ ಭರ್ತಿಗೆ 9 ಅಡಿಯಷ್ಟೇ ಬಾಕಿಯಿದೆ. ಕಳೆದ ವರ್ಷ ಇದೇ ದಿನ 2,821 ಅಡಿ ಲಯಷ್ಟೇ ನೀರಿತ್ತು.
ಚಟ್ಟಳ್ಳಿ- ಮಡಿಕೇರಿ ರಸ್ತೆಯ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂಕುಸಿತವಾಗಿದ್ದು ಈ ರಸ್ತೆಯಲ್ಲಿ ಸಂಚಾರ ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.