ಮಡಿಕೇರಿ: ಸಮೀಪದ ವಿರಾಜಪೇಟೆ ಪಟ್ಟಣದ ಬಣ್ಣದ ಅಂಗಡಿಯೊಂದರಲ್ಲಿ ಸೋಮವಾರ ನಸುಕಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಬಣ್ಣ ಹಾಗೂ ಇತರೆ ಪರಿಕರಗಳು ಭಸ್ಮವಾಗಿವೆ.
ಗೋಣಿಕೊಪ್ಪಲು ರಸ್ತೆಯ 'ನಂದಿ ಬಣ್ಣದ ಅಂಗಡಿ'ಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ, ಅಗ್ನಿಶಾಮಕ ಪಡೆ ಸ್ಥಳಕ್ಕೆ ಬಂದು ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ಹರಡುವುದನ್ನು ತಪ್ಪಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿತ್ತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.