ಸೋಮವಾರಪೇಟೆ: ತಾಲ್ಲೂಕಿನ ಐಗೂರು ಗ್ರಾಮದ ಕಾಲೇಜು ವಿದ್ಯಾರ್ಥಿ ಹೇಮಂತ್ ಈಚೆಗೆ ವಿದ್ಯುತ್ ಅವಘಡದಿಂದ ನಿಧನ ಹೊಂದಿದ ಹಿನ್ನೆಲೆಯಲ್ಲಿ, ಶಾಸಕ ಡಾ.ಮಂತರ್ ಗೌಡ ಶನಿವಾರ ಮೃತ ಯುವಕನ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ವಿಜಯನಗರ ನಿವಾಸಿ ಮಂಜುನಾಥ್ ಹಾಗೂ ಸುಜಾತಾ ದಂಪತಿ ಪುತ್ರ, ಕುಶಾಲನಗರದ ಎಂ.ಜಿ.ಎಂ. ಕಾಲೇಜಿನ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (19) ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದರು. ಕಾಲೇಜಿಗೆ ತೆರಳಿ ಸಂಜೆ 6 ಗಂಟೆಗೆ ಮನೆಗೆ ವಾಪಸ್ಸಾಗಿ, ಸ್ನಾನ ಮಾಡುವ ಸಲುವಾಗಿ ಬಿಸಿ ನೀರು ಕಾಯಿಸಿಕೊಳ್ಳಲು ಪಾತ್ರೆಯೊಂದರಲ್ಲಿ ತಣ್ಣೀರು ತುಂಬಿ ವಿದ್ಯುತ್ ಚಾಲಿತ ಹೀಟರ್ ಹಾಕಿದ್ದರು.
ದಿಢೀರ್ ಆಘಾತದಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಹೇಮಂತ್ರನ್ನು ತಕ್ಷಣ ಪಟ್ಟಣದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.