ADVERTISEMENT

ಕುಶಾಲನಗರ: ವಿವಿಧೆಡೆ ವರುಣನ ಸಿಂಚನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 16:20 IST
Last Updated 18 ಏಪ್ರಿಲ್ 2024, 16:20 IST
ಕುಶಾಲನಗರ ಸಮೀಪದ ಸಿದ್ಧಲಿಂಗಪುರ, ಬಾಣವಾರದ ಸುತ್ತಮುತ್ತ ಗುರುವಾರ ಸಂಜೆ ತುಂತುರು ಮಳೆ ಸುರಿಯಿತು
ಕುಶಾಲನಗರ ಸಮೀಪದ ಸಿದ್ಧಲಿಂಗಪುರ, ಬಾಣವಾರದ ಸುತ್ತಮುತ್ತ ಗುರುವಾರ ಸಂಜೆ ತುಂತುರು ಮಳೆ ಸುರಿಯಿತು   

ಕುಶಾಲನಗರ: ತಾಲ್ಲೂಕಿನ ವಿವಿಧೆಡೆ ಗುರುವಾರ ಸಂಜೆ ವರುಣನ ಸಿಂಚನವಾಗಿದೆ.

ಮಧ್ಯಾಹ್ನದಿಂದಲೇ ಮೋಡಕವಿದ ವಾತಾವರಣ ಇತ್ತು. ಸಂಜೆ ಕುಶಾಲನಗರ, ಮುಳ್ಳುಸೋಗೆ, ಕೂಡಿಗೆ, ಹೆಬ್ಬಾಲೆ, ಅಳುವಾರ, ಸಿದ್ಧಲಿಂಗಪುರ, ಬಾಣವಾರ, ಅಲೂರು ಸೇರಿದಂತೆ ವಿವಿಧೆಡೆ ಕೆಲಕಾಲ ತುಂತುರು ಮಳೆ ಸುರಿಯಿತು. ಇದರಿಂದ ಬಿಸಿಲಿನ ಧಗೆಯಿಂದ ಕೂಡಿದ್ದ ವಾತಾವರಣ ಸ್ವಲ್ಪ ಮಟ್ಟಿಗೆ ತಂಪಾಯಿತು. ಆದರೆ ನಿರೀಕ್ಷೆಯಂತೆ‌ ಮಳೆ ಬಾರದ ಹಿನ್ನೆಲೆಯಲ್ಲಿ ರೈತಾಪಿ ವರ್ಗಕ್ಕೆ ನಿರಾಸೆ ಉಂಟಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT