ADVERTISEMENT

ಕುವೆಂಪು ಪುತ್ಥಳಿ ಅನಾವರಣ 24ರಂದು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 6:09 IST
Last Updated 21 ಅಕ್ಟೋಬರ್ 2025, 6:09 IST
ಕುವೆಂಪು
ಕುವೆಂಪು   

ಸೋಮವಾರಪೇಟೆ: ರಾಷ್ಟ್ರಕವಿ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ವಿಶ್ವಮಾನವ ಕುವೆಂಪು ಪುತ್ಥಳಿ ಅನಾವರಣ ಕಾರ್ಯಕ್ರಮ ಅ.24ರಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ನಡೆಯಲಿದೆ ಎಂದು ನಿರ್ಮಾಣ ಸಮಿತಿ ಅಧ್ಯಕ್ಷ ಜೆ.ಸಿ.ಶೇಖರ್ ತಿಳಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11ಗಂಟೆಗೆ ಶಾಸಕ ಡಾ.ಮಂತರ್ ಗೌಡ ಪ್ರತಿಮೆ ಅನಾವರಣಗೊಳಿಸುವರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಮಾಜಿ ಸಚಿವರಾದ ಬಿ.ಎ.ಜೀವಿಜಯ, ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಕುಪ್ಪಳ್ಳಿ ಕುವೆಂಪು ಪ್ರತಿಷ್ಠಾನದ ಖಜಾಂಚಿ ಡಿ.ಎಂ.ಮನುದೇವ್ ದೇವಾಂಗಿ, ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ ಉಪಸ್ಥಿತರಿರುವರು ಎಂದರು.

ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೆಳನದ ಖಜಾಂಚಿ ಎ.ಆರ್.ಮುತ್ತಣ್ಣ ಮಾತನಾಡಿ, ‘ಜಾತಿಯಲ್ಲಿ ಒಕ್ಕಲಿಗನಾಗಿದ್ದರೂ, ಜಾತಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ, ವಿಶ್ವಮಾನವನಾಗಿ ಕುವೆಂಪು ಗುರುತಿಸಿಕೊಂಡಿದ್ದರು. ರಾಮಾಯಣ ಸೇರಿದಂತೆ ಅನೇಕ ಗ್ರಂಥಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಇವರ ನೆನಪಿಗಾಗಿ ಕುವೆಂಪು ಪುತ್ಥಳಿ ನಿರ್ಮಾಣ ಶ್ಲಾಘನೀಯ’ ಎಂದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ, ಗೌರವ ಕಾರ್ಯದರ್ಶಿ ಎ.ಪಿ.ವೀರರಾಜು. ಗೌರವ ಖಜಾಂಚಿ ಕೆ.ಪಿ.ದಿನೇಶ್, ಸಾಹಿತ್ಯ ಸಮ್ಮೆಳನದ ಖಜಾಂಚಿ ಎ.ಆರ್.ಮುತ್ತಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.