ADVERTISEMENT

ಮಡಿಕೇರಿ– ಕುಶಾಲನಗರ ರಸ್ತೆ ಸಂಚಾರ ಬಂದ್‌

ಜೋಡುಪಾಲದ ಬಳಿ ಹೆದ್ದಾರಿಯ ಒಂದು ಬದಿ ಕುಸಿತ 

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 6:03 IST
Last Updated 7 ಆಗಸ್ಟ್ 2020, 6:03 IST
ಕೊಡಗಿನ ಚೆದುಕಾರು ಸೇತುವೆ ಮುಳುಗಡೆಯಾಗಿದೆ
ಕೊಡಗಿನ ಚೆದುಕಾರು ಸೇತುವೆ ಮುಳುಗಡೆಯಾಗಿದೆ   
""

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾವೇರಿ ಪ್ರವಾಹಕ್ಕೆ ಹಲವು ರಸ್ತೆಗಳ ಸಂಚಾರ ಬಂದ್‌ ಆಗಿದೆ. ಕುಶಾಲನಗರದ ತಾವರೆಕೆರೆ ಬಳಿ ಮಡಿಕೇರಿ– ಕುಶಾಲನಗರ ರಸ್ತೆಯ ಮೇಲೆ ನೀರು ಬಂದಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ.

ಇನ್ನು ಮಡಿಕೇರಿ– ವಿರಾಜಪೇಟೆಯ ನಡುವೆಯ ಭೇತ್ರಿ ಸೇತುವೆ ಮುಳುಗಡೆ ಸ್ಥಿತಿಯಲ್ಲೇ ಇದೆ. ಬಿಳಿಗೇರಿ ಸೇತುವೆ ಕೊಚ್ಚಿ ಹೋಗಿದೆ. ಬಿಳಿಗೇರಿ – ಹಾಕತ್ತೂರು ನಡುವೆ ಸಂಪರ್ಕ ಕಡಿತಗೊಂಡಿದೆ.

ಮಡಿಕೇರಿ– ಮಂಗಳೂರು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 275ರ ಜೋಡುಪಾಲದ ಬಳಿ ಹೆದ್ದಾರಿಯ ಒಂದು ಬದಿ ಕುಸಿದಿದೆ. ಬೃಹತ್‌ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ADVERTISEMENT
ಭಾಗಮಂಡಲ ಜಲಾವೃತವಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.