ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಭೂಕುಸಿತಗಳು ಗುರುವಾರವೂ ಮುಂದುವರಿದಿವೆ.
ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿಯಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ತೋಟದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಭಾರಿ ಪ್ರಮಾಣದಲ್ಲಿ ನೀರು ನೆಲದಿಂದ ಉಕ್ಕಿ ಹರಿಯುತ್ತಿದ್ದು, ಆತಂಕ ಮೂಡಿಸಿದೆ. ಇದರಿಂದ ಕಾಫಿ ಗಿಡಗಳೂ ಸೇರಿದಂತೆ ಮಣ್ಣು, ಕಲ್ಲುಗಳು ಕೊಚ್ಚಿಕೊಂಡು ಹೋಗಿವೆ.
ಮಂಚಳ್ಳಿ–ಕುಟ್ಟ ರಸ್ತೆಯಲ್ಲೂ ಭೂಮಿ ಕುಸಿದಿದೆ. ಬಿರುನಾಣಿ– ಹುದಿಕೇರಿ ರಸ್ತೆಯಲ್ಲೂ ಮಣ್ಣು ಕುಸಿಯುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ರಾಜು ಎಂಬುವವರಿಗೆ ಸೇರಿದ ಹಸು ಶೀತಗಾಳಿಯಿಂದ ಮೃತಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.