ಮಡಿಕೇರಿ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಟಿಪ್ಪು ಜಯಂತಿ ರದ್ದು ಪಡಿಸಿರುವಂತೆಯೇ, ‘ಲವ್ ಜಿಹಾದ್’ ಮಟ್ಟ ಹಾಕಲೂ ಕಠಿಣ ಕಾನೂನು ರೂಪಿಸಲಿದ್ದಾರೆ’ ಎಂದು ಸಂಸದ ಪ್ರತಾಪ ಸಿಂಹ ಇಲ್ಲಿ ಬುಧವಾರ ಹೇಳಿದರು.
‘ಪ್ರೀತಿಸುವ ವೇಳೆ ಅಡ್ಡ ಬರದ ಧರ್ಮ, ಮದುವೆಯಾಗುವ ವೇಳೆ ಅಡ್ಡ ಬರುವುದೇಕೆ? ಮದುವೆಯಾಗಲು ಮತಾಂತರ ಆಗುವುದು ಕಡ್ಡಾಯ ಎನ್ನುವವರು ನಿಜವಾಗಿಯೂ ಧರ್ಮಾಂಧರು. ಕೆಲವರಲ್ಲಿ ರಕ್ತಗತವಾಗಿಯೇ ಮತಾಂಧತೆ ಅಡಗಿದೆ. ಮದುವೆಗಾಗಿ ಮತಾಂತರ ತಡೆಯಲು ಉತ್ತರ ಪ್ರದೇಶ ಸರ್ಕಾರವು ಕಾನೂನು ರೂಪಿಸಲು ಮುಂದಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.